ಭಾರತ ತಂಡ ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಎಸ್ಡಿಪಿಐ ಕಾರ್ಯ ಕರ್ತರು ಸೋಮವಾರ ೧೧೧ ಮೀಟರ್ ಉದ್ದದ ರಾಷ್ಟ್ರ ಧ್ವಜದೊಂದಿಗೆ ಪುತ್ತೂರಿನಲ್ಲಿ ವಿಜಯೋತ್ಸವ ಆಚರಿಸಿದರು.
ಪುತ್ತೂರು ನಗರದಾದ್ಯಂತ ಐಸ್ ಕ್ರೀಂ ಹಂಚಿ ಎಸ್ಡಿ ಪಿಐ ಕಾರ್ಯಕರ್ತರು ಸಾರ್ವಜನಿಕರಿಗೆ ವಿಶ್ವಕಪ್ ಸಿಹಿ ಉಣಿ ಸಿದರು. ದರ್ಬೆಯಿಂದ ಬೊಳುವಾರು ತನಕ ಮುಖ್ಯ ರಸ್ತೆಯಲ್ಲಿ ವಿಜಯೋತ್ಸವ ಮೆರವಣಿಗೆ ನಡೆಯಿತು. ದಾರಿಯುದ್ದಕ್ಕೂ ನೆರೆದ ಮಂದಿಗೆ ಮತ್ತು ಪೇಟೆಯಲ್ಲಿ ಸಂಚರಿಸುತ್ತಿದ್ದವರಿಗೆ ವಿಶ್ವಕಪ್ ವಿಜಯದ ಹೆಸರಿನಲ್ಲಿ ಐಸ್ಕ್ರೀಂ ಕಪ್ ವಿತರಿಸಲಾಯಿತು. ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಎಸ್ಡಿಪಿಐ ಅಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ ಪುತ್ತೂರಿನ ದರ್ಬೆಯಲ್ಲಿ ವಿಜಯೋತ್ಸವ ಮೆರವಣಿಗೆಗೆ ಚಾಲನೆ ನೀಡಿದರು. ರಾಜ್ಯ ಸಮಿತಿಯ ಉಪಾಧ್ಯಕ್ಷ ಅಬ್ದುಲ್ ಲತೀಫ್ ಪುತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ