ಬುಧವಾರ, ಏಪ್ರಿಲ್ 13, 2011

ಮಡಿಕೇರಿ: ಎಸ್‌ಡಿಪಿಐ ವತಿಯಿಂದ ಅಮಾಯಕರ ಬಂಧನದ ಬಗ್ಗೆ ಜಾಗೃತಿ ಸಭೆ

ಮಡಿಕೇರಿ: ‘ಅಮಾಯಕರನ್ನು ಬಿಡುಗಡೆಗೊಳಿಸಿ, ಅಪರಾಧಿಗಳನ್ನು ಶಿಕ್ಷಿಸಿ, ಭ್ರಷ್ಟಾಚಾರವನ್ನು ತೊಲಗಿಸಿ’ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾವು ಇತ್ತೀಚೆಗೆ ಮಡಿಕೇರಿಯಲ್ಲಿ ಜಾಗೃತಿ ಸಭೆೊಂದನ್ನು ನಡೆಸಿತು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಫಝಲುಲ್ಲಾ, ಪ್ರಧಾನ ಕಾರ್ಯದರ್ಶಿ ಅಮೀನ್ ಮುಹ್ಸಿನ್, ದಲಿತ ನಾಯಕ ನಿರ್ವಾಣಪ್ಪ, ಸಿದ್ದಾಪುರ ಗ್ರಾಮ ಪಂಚಾಯತ್ ಸದಸ್ಯ ಶೌಕತ್ ಅಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದೇಶದಲ್ಲಿ ನಡೆಯುತ್ತಿರುವ ಹಲವು ಬಾಂಬ್ ಸ್ಫೋಟಗಳಲ್ಲಿ ಅಮಾಯಕ ಯುವಕರ ಬಂಧನಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು, ಅವರ ಬಿಡುಗಡೆಗಾಗಿ ಒತ್ತಾಯಿಸಲು ಮತ್ತು ದೇಶದಲ್ಲಿ ಅಪಾಯಕಾರಿಯಾಗಿ ಬೆಳೆಯುತ್ತಿರುವ ಭ್ರಷ್ಟಾಚಾರಗಳ ವಿರುದ್ಧ ಜನರಲ್ಲಿ ಎಚ್ಚರಿಕೆ ಮೂಡಿಸುವುದಕ್ಕಾಗಿ ಪಕ್ಷವು ದೇಶಾದ್ಯಂತ ಈ ರಾಷ್ಟ್ರೀಯ ಅಭಿಯಾನವನ್ನು ನಡೆಸುತ್ತಿದೆ.
 
 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ