ಶುಕ್ರವಾರ, ಏಪ್ರಿಲ್ 15, 2011

ಎಸ್‌ಡಿಪಿಐ ಸದಸ್ಯತ್ವ ಅಭಿಯಾನ ಉದ್ಘಾಟನೆ

ಎಸ್‌ಡಿಪಿಐ ಸದಸ್ಯತ್ವ ಅಭಿಯಾನ ಉದ್ಘಾಟನೆ
 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಉಡುಪಿ ಜಿಲ್ಲೆಯ ಸದಸ್ಯತ್ವ ಅಭಿಯಾನಕ್ಕೆ ಗುರುವಾರ ಉಡುಪಿಯ ರುಕ್ಮಿಣಿ ರೆಸಿ ಡೆನ್ಸಿಯಲ್ಲಿ ಚಾಲನೆ ನೀಡಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿ ಗಳಾಗಿ ಎಸ್‌ಡಿಪಿಐ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಅಬ್ದುಲ್ ಮಜೀದ್ ಮಾತನಾಡಿ, ಇಂದು ದೇಶದ ಬಹು ಸಂಖ್ಯಾತರಾದ ಆದಿವಾಸಿಗಳು, ದಲಿ ತರು, ಅಲ್ಪಸಂಖ್ಯಾತರು ಅಧಿಕಾರದಿಂದ ವಂಚಿತರಾಗಿದ್ದಾರೆ. ನಮ್ಮಲ್ಲಿ ಒಡೆದು ಆಳುವ ನೀತಿಯನ್ನು ರಾಜಕೀಯ ಪಕ್ಷ ಗಳು ಅನುಸರಿಸುತ್ತಿವೆ. ದಲಿತರ ಕೇರಿಗಳಲ್ಲಿ ಯಾವುದೇ ರೀತಿಯ ಮೂಲಭೂತ ವ್ಯವಸ್ಥೆಗಳಿಲ್ಲ ಎಂದು ಆರೋಪಿಸಿದರು.

ರಾಜ್ಯ ಉಪಾಧ್ಯಕ್ಷ ಅಬ್ದುಲ್ ಲತೀಫ್ ಪುತ್ತೂರು ಉಪಸ್ಥಿತರಿದ್ದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀರ್ ಹಂಝ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಕೀಂ ಉಚ್ಚಿಲ ಸ್ವಾಗತಿಸಿದರು. ಉಡುಪಿ ಕ್ಷೇತ್ರ ಅಧ್ಯಕ್ಷ ಫಝಿಲ್ ಆದಿ ಉಡುಪಿ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ