ಮಂಗಳವಾರ, ಮೇ 03, 2011

ಮಂಗಳೂರು: ಬೀದಿ ವ್ಯಾಪಾರಸ್ಥರ ಪ್ರತಿಭಟನೆಗೆ ಎಸ್‌ಡಿಪಿಐ ಬೆಂಬಲ

ಮಂಗಳೂರು: ತಮ್ಮ ಅಂಗಡಿಯನ್ನು ತೆರವುಗೊಳಿಸಿರುವುದರ ವಿರುದ್ಧ ಮಂಗಳೂರಿನ ಬೀದಿ ವ್ಯಾಪಾರಸ್ಥರು ದಿನಾಂಕ 2-5-2011ರಂದು  ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಎಸ್‌ಡಿಪಿಐ ಬೆಂಬಲಿಸಿತು.
ಪ್ರತಿಭಟನೆಯ ಅಂಗವಾಗಿ ರ್ಯಾಲಿ ನಡೆಸಲಾಯಿತು.
ಮಂಗಳೂರಿನ ಸ್ಟೇಟ್‌ಬ್ಯಾಂಕ್‌ನಿಂದ ಬಂದರ್ ಮಾರ್ಗವಾಗಿ ಸಂಚರಿಸಿದ ರ್ಯಾಲಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಸೇರಿತು. ನಂತರ ಒಂದು ದಿನದ ಉಪವಾಸ ಧರಣಿ ಕುಳಿತುಕೊಳ್ಳಲಾಯಿತು. ಎಸ್‌ಡಿಪಿಐ ಕೂಡ ಧರಣಿಯಲ್ಲಿ ಪಾಲ್ಗೊಂಡಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಅಕ್ಬರ್ ಅಲಿ ಮತ್ತು ಕಾರ್ಯದರ್ಶಿ ಸಲೀಂ ಗುರುವಾಯನಕೆರೆ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮಂಗಳೂರು, ಉಳ್ಳಾಲ ವಿಧಾನ ಸಭಾ ಕ್ಷೇತ್ರಾಧ್ಯಕ್ಷರಾದ ನವಾಝ್ ಉಳ್ಳಾಲ್, ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ರಫ್ ಮಂಚಿ, ಮಂಗಳೂರು ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಝಮೀರ್ ಬೆಂಗ್ರೆ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ನಿಯಾಝ್ ಅಹ್ಮದ್ ಹಾಗೂ ಇತರರು ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ