ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾದ್ಯಂತ ‘ಪ್ರಜಾಪ್ರಭುತ್ವಕ್ಕೆ ಕಾಯಕಲ್ಪ-ಎಸ್ಡಿಪಿಐ ಸಂಕಲ್ಪ’ ಎಂಬ ಘೋಷಣೆಯೊಂದಿಗೆ ಹಮ್ಮಿಕೊಂಡಿರುವ ಸದಸ್ಯತ್ವ ಅಭಿಯಾನಕ್ಕೆ ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ಎಸ್ಡಿಪಿಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ದಿಕ್ಸೂಚಿ ಭಾಷಣ ಮಾಡಿದ ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಬರ್ ಅಲಿ, ಎಸ್ಡಿಪಿಐ ಬೆಳವಣಿಗೆ ಮತ್ತು ಅದರ ಉದ್ದೇಶದ ಬಗ್ಗೆ ವಿವರಿಸಿದರು.
ಅಧ್ಯಕ್ಷೀಯ ಭಾಷಣ ಮಾಡಿದ ಅಕ್ಬರ್ ಬೆಳ್ತಂಗಡಿ, ದೇಶವು ಎದುರಿಸುತ್ತಿರುವ ಸವಾಲುಗಳು, ಇಂದಿನ ರಾಜಕೀಯ ಪರಿಸ್ಥಿತಿ ಮತ್ತು ಎಸ್ಡಿಪಿಐ ಜವಾಬ್ದಾರಿಯ ಬಗ್ಗೆ ಮಾತನಾಡಿದರು. ತಾಲೂಕಿನಲ್ಲಿ ಸದಸ್ಯತ್ವ ಅಭಿಯಾನವು ಯಶಸ್ವಿಯಾಗಿ ನಡೆಯಬೇಕು ಎಂದು ಅವರು ಕರೆಯಿತ್ತರು.
ವೇದಿಕೆಯಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಜಲೀಲ್ ಕೆ., ಕಾರ್ಯದರ್ಶಿ ಸಲೀಂ ಗುರುವಾಯನಕೆರೆ, ತಾಲೂಕು ಪ್ರಧಾನ ಕಾರ್ಯದರ್ಶಿ ಹಮೀದ್ ವೇಣೂರು, ಸದಸ್ಯರಾದ ಇಸ್ಮಾಯೀಲ್ ಹಾಜಿ, ಹೈದರ್ ನೀರ್ಸಾಲ್ ಉಪಸ್ಥಿತರಿದ್ದರು.
ತಾಲೂಕು ಕಾರ್ಯದರ್ಶಿ ಅನೀಸ್ ಗೇರುಕಟ್ಟೆ ಸ್ವಾಗತಿಸಿ, ಅಶ್ರಫ್ ಪಿ. ವಂದಿಸಿದರು. ನಿಝಾಮುದ್ದೀನ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ