ಭಾನುವಾರ, ಫೆಬ್ರವರಿ 27, 2011

ವಿದ್ಯಾರ್ಥಿಗಳು ನೋವುಂಡವರ ಧ್ವನಿಯಾಗಲಿ: ಸಿಎಫ್‌ಐನ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಚಿಂತಕ ಶಿವಸುಂದರ್

ಸ್ವಾವಿದ್ಯಾರ್ಥಿಗಳು ನೋವುಂಡವರ ಧ್ವನಿಯಾಗಲಿ:  ಸಿಎಫ್‌ಐನ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಚಿಂತಕ ಶಿವಸುಂದರ್ತಂತ್ರ ಪೂರ್ವದಲ್ಲಿ ಬ್ರಿಟಿಷರು ದೇಶದ ಹಲವು ಕೈಗಾರಿಕೆಗಳನ್ನು ನಾಶ ಮಾಡಿದರು. ಈಗ ವಿಶ್ವವಾಣಿಜ್ಯ ಒಪ್ಪಂದದ ಬಳಿಕ ಅಮೆರಿಕದ ಗುಲಾಮಗಿರಿಯತ್ತ ನಾವು ಸಾಗುತ್ತಿದ್ದೇವೆ. ಪ್ರಜಾಪ್ರಭುತ್ವದ ಪ್ರತಿಗಾಮಿ ಶಕ್ತಿಗಳು ವಿಜೃಂಭಿಸುತ್ತಿವೆ. ರಾಜರ ಪ್ರಭುತ್ವ ತರಲು ಹವಣಿಸುತ್ತಿವೆ. ಇಂತಹ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ದಲಿತರು, ನೋವುಂಡವರ ಧ್ವನಿಯಾಗಬೇಕು ಎಂದು ಖ್ಯಾತ ಚಿಂತಕ, ಅಂಕಣಕಾರ ಶಿವಸುಂದರ್ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಸಮಾವೇಶದ ಅಂಗವಾಗಿ ನಗರದ ಡಾನ್‌ಬಾಸ್ಕೋ ಹಾಲ್‌ನಲ್ಲಿ ರವಿವಾರ ನಡೆದ ವಿಚಾರ ಸಂಕಿರಣವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ