ಮಂಗಳೂರು, ಮಾ.30: ಎಸ್ಡಿಪಿಐ ರಾಷ್ಟ್ರಾದ್ಯಂತ ಹಮ್ಮಿಕೊಂಡಿರುವ ಅಮಾಯಕ ರನ್ನು ಬಿಡುಗಡೆಗೊಳಿಸಿ, ಅಪರಾಧಿಗಳನ್ನು ಜೈಲಿಗೆ ತಳ್ಳಿ, ಭ್ರಷ್ಟಾಚಾರವನ್ನು ತೊಲಗಿಸಿ ಎಂಬ ಧ್ಯೇಯದ ರಾಷ್ಟ್ರೀಯ ಅಭಿಯಾನದ ಅಂಗವಾಗಿ ಎ.1ರಂದು ಮಂಗಳೂರಿನಲ್ಲಿ ರ್ಯಾಲಿ ಹಾಗೂ ಸಾರ್ವಜನಿಕ ಸಭೆಯನ್ನು ಆಯೋಜಸಲಾಗಿದೆ.ಎ.1ರಂದು ಅಪರಾಹ್ಣ 3ಗಂಟೆಗೆ ಮಂಗಳೂರು ತಾಲೂಕು ಕಚೇರಿಯ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರ್ಯಾಲಿ ಹೊರಡಲಿದೆ. ಜಿಲ್ಲಾಧಿಕಾರಿ ಕಚೇರಿಯ ಎದುರು ಸಾರ್ವಜನಿಕ ಸಭೆ ಆಯೋಜಿಸ ಲಾಗಿದೆ ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ ಜಲೀಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ