ಶುಕ್ರವಾರ, ಏಪ್ರಿಲ್ 01, 2011

ಮುಸ್ಲಿಮರು ಭಾರತದಲ್ಲಿ ಅತಿ ಹೆಚ್ಚು ಶೋಷಣೆಗೆ ಒಳಗಾಗುತ್ತಿದ್ದಾರೆ:ಉದ್ಯಾವರ ಚರ್ಚ್‌ನ ಧರ್ಮಗುರು ರೆ.ಫಾ.ವಿಲಿಯಂ ಮಾರ್ಟಿಸ್

ಭ್ರಷ್ಟಾಚಾರ, ಬೆಲೆ ಏರಿಕೆ ಹಾಗೂ ಅಮಾಯಕರ ಬಂಧನದ ವಿರುದ್ಧ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದೇಶ ವ್ಯಾಪಿ ಹಮ್ಮಿಕೊಂಡಿರುವ ಅಭಿಯಾನದ ಪ್ರಯುಕ್ತ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇಂದು ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಉದ್ಯಾವರ ಚರ್ಚ್‌ನ ಧರ್ಮಗುರು ರೆ.ಫಾ.ವಿಲಿಯಂ ಮಾರ್ಟಿಸ್, ಮುಸ್ಲಿಮರು ಭಾರತದಲ್ಲಿ ಅತಿ ಹೆಚ್ಚು ಶೋಷಣೆಗೆ ಒಳಗಾಗುತ್ತಿದ್ದಾರೆ. ದೇಶದಲ್ಲಿ ಸಂಭವಿಸಿದ ಹಲವು ಭಯೋತ್ಪಾದನಾ ಪ್ರಕರಣಗಳಲ್ಲಿ ಅಮಾಯಕ ಮುಸ್ಲಿಮರನ್ನು ಬಂಧಿಸ ಲಾಗಿತ್ತು. ಆದರೆ ಅವರು ಅಮಾಯಕರು ಎಂದು ತಿಳಿದಾಗಲೂ ಕೂಡ ಸರಕಾರ ಅಥವಾ ಪೊಲೀಸ್ ಇಲಾಖೆ ಯಾವುದೇ ರೀತಿಯ ಕ್ಷಮೆಯಾಚಿಸಿಲ್ಲ. ಇದು ದೇಶದ ದುರಂತ ಎಂದು ಆರೋಪಿಸಿದರು.
ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಅಮೀರ್ ಹಂಝಾ, ಪ್ರಧಾನ ಕಾರ್ಯ ದರ್ಶಿ ಹಕೀಂ ಉಚ್ಚಿಲ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ